ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಿರುವ ಪ್ರಶ್ನೋತ್ತರಗಳು

1) ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು? ( KAS-1999 )
👉 ಕಲ್ಯಾಣಸ್ವಾಮಿ,

2) ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ? ( KAS1999 )
👉 ಧಾರವಾಡ

3) ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ? 
👉 ಅಂಕೋಲಾ

4) ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು? ( KAS-1999 )
👉 ಉಪ್ಪಿನ ಸತ್ಯಾಗ್ರಹ,

5) ಹಿಂದಿನ ಮೈಸೂರು ರಾಜ್ಯದಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಚಳವಳಿ ಆರಂಭವಾದದ್ದು? ( KAS-1999 )
👉 1947ರಲ್ಲಿ
 
6)19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು? ( KAS-1999 )
👉 ನವಂಬರ್ 1, 1956

7)1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ? ( KAS-2005 )
👉 ಮುಂಬೈ,

8) ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು "ಯೂನಿಟ್ ಕಾಂಗ್ರೆಸ್" ಎಂದು    ಎಕರೆಯಲಾಗಿದೆ,  ಕಾಂಗ್ರೆಸ್ ಅಧಿವೇಶನದ ಜೊತೆಜೊತೆಗೆ ನಡೆದ ಅಧಿವೇಶನ ಯಾವುದು? ( KAS-2002 )
👉 ಅಖಿಲ ಭಾರತ ಸಾಮಾಜಿಕ ಸಮ್ಮೇಳ , 

9) ವಸಾಹತುಶಾಹಿ ಭಾರತದಲ್ಲಿ ಅರಸರ ಶ್ರೇಣಿಯಲ್ಲಿ ಮೈಸೂರು ಸಂಸ್ಥಾನದ ಸಂಸ್ಥಾನವು ಈ ರೀತಿಯದು? ( KAS-2015 )
👉 21ಬಂದೂಕು ಸಲಾಮಿನ ರಾಜ್ಯ,

10)1930ರ ಎಪ್ರಿಲ್ ನಲ್ಲಿ ಬೆಳಗಾವಿನಲ್ಲಿ ಉಪ್ಪನ್ನು ಮಾರಿ ಉಪ್ಪಿನ ಕಾನೂನನ್ನು ಮುರಿದವರು ಯಾರು? ( KAS-2017 )
👉 ಗಂಗಾಧರರಾವ್ ದೇಶಪಾಂಡೆ ,  

11) ಗಾಂಧೀಜಿಯವರ ದಂಡಿ ಉಪ್ಪಿನ ಸತ್ಯಾಗ್ರಹ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ? ( KAS-2017 )
👉 ಮೈಲಾರ ಮಹದೇವಪ್ಪ,

12) ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು? 
👉 ವೆಸ್ಲಿಯನ್ , 

13) ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲ ತಂತ್ರದಿಂದ ಬ್ರಿಟಿಷರೊಡನೆ ಹೋರಾಟ ನಡೆಸಿದ್ದ ಕರ್ನಾಟಕದ ಪ್ರಸಿದ್ಧ ಸ್ವತಂತ್ರ ಹೋರಾಟಗಾರ ಯಾರು? ( KAS-2017 )
👉 ಸಂಗೊಳ್ಳಿ ರಾಯಣ್ಣ ,

14) ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು  ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು 1918ರಲ್ಲಿ ನೇಮಿಸಿದ ಸಮಿತಿ ಯಾವುದು? ( KAS-2017 )
👉 ಮಿಲ್ಲರ್ ಸಮಿತಿ,

15) 1953 ರಲ್ಲಿನ ರಾಜ್ಯಗಳ ಪುನರ್ ರಚನಾ ಆಯೋಗವು ಇವರ ಅಧ್ಯಕ್ಷತೆ ಮತ್ತು ಸದಸ್ಯತ್ವದಲ್ಲಿ ರಚಿಸಲಾಯಿತು?  ( KAS-2017 )
👉 ಅಧ್ಯಕ್ಷರು= ಫಜಲ್ ಅಲಿ , 
 ಸದಸ್ಯರು= H,N,ಕುಂಜರು, ಕೆ, ಎಂ,  ಪನಿಕರ್

16)1928ರ ಬೆಂಗಳೂರಿನ ಗಲಭೆಗಳಲ್ಲಿ ಕಂಡು ಬಂದಿರುವಂತಹ ಗಣಪತಿ ಗಲಭೆ ಮತ್ತು ಹಿಂದೂ-ಮುಸ್ಲಿಂ ಸರಣಿ ಸಂಘರ್ಷಗಳು ಬೆಂಗಳೂರು ನಗರದಲ್ಲಿ ಶಾಲೆಯ ಆವರಣದಲ್ಲಿ ಒಂದು ಗಣೇಶ ಪ್ರತಿಮೆಯ ಮೇಲೆ ಕಮಾನುಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಉಂಟಾಗಿದ್ದು ಇದನ್ನು ಮೈಸೂರಿನ ಮಹಾರಾಜರು ಖಂಡಿಸಿ ಈ ಘಟನೆಯ ಬಗ್ಗೆ ವಿಚಾರಣೆ ನಡೆಸಲು ಸಮಿತಿಯೊಂದನ್ನು ರಚಿಸಿತು ಈ ಸಮಿತಿಯ ಮುಖ್ಯಸ್ಥರು ಯಾರು? ( KAS-2017 )
👉 ಸರ್ ಎಂ ವಿಶ್ವೇಶ್ವರಯ್ಯ

17) ಯಾವ ವರದಿಯನ್ನಾದರಿಸಿ 1956 ರಲ್ಲಿ ಕರ್ನಾಟಕ ರೂಪಗೊಂಡಿತು? ( PSI-2018 )
👉 ಫಜಲ್ ಅಲಿ ಸಮಿತಿ 

18) ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು? ( PSI/ RSI-2014.2016 )
👉 ಹೆನ್ರಿ ಇರ್ವಿನ್,

19) ಜಯ ಭಾರತ ಜನನಿಯ ತನುಜಾತೆ ರಚಿಸಿದವರು? ( PSI-2015 )
👉 ಕುವೆಂಪು,

20) ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ? ( PSI-2015 )
👉 ಜಾನ್ ವೀಡ

21) ಕರ್ನಾಟಕದಲ್ಲಿ 1842 ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ? ( PSI-2014 )
👉 ಮಂಗಳೂರು ಸಮಾಚಾರ,

22) ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ? ( PSI-2014 )
👉 ಚಿಕ್ಕಬಳ್ಳಾಪುರ

23) ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯಲ್ಲಿ ಏಕೈಕ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳ? ( PSI-2014 )
👉 ಬೆಳಗಾವಿ-1924ರಲ್ಲಿ 

24) ಹಿಂದೂಸ್ತಾನ ಸೇವಾದಳ ವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು? ( PSI-2018 )
👉 ಎನ್ ಎಸ್ ಹರ್ಡೆಕರ್,

25) ಮೈಸೂರು ಚಲೋ ಚಳುವಳಿ ನಡೆದ ವರ್ಷ? ( PSI-2013 )
👉 1947

26) ಕನ್ನಡದ ಧ್ವಜವನ್ನು ವಿನ್ಯಾಸ ಮಾಡಿದವರು? ( PSI-2009 )
👉 ಎಂ ರಾಮಮೂರ್ತಿ , 

27) ನಮ್ಮ ನಾಡಿನಲ್ಲಿ ಆಶ್ವಯುಜ ಮಾಸದಲ್ಲಿ ಬರುವ ಹಬ್ಬ ಅಂದರೆ? ( PSI-2009 )
👉 ನವರಾತ್ರಿ,

28) ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು? ( PSI-2009 )
👉 4ನೇ ಶ್ರೀ ಕೃಷ್ಣರಾಜಒಡೆಯ

29) ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ?   ( PSI-2009 )
👉 ಮಂಡ್ಯ

30) ಕರ್ನಾಟಕದಲ್ಲಿ ಗಾಂಧೀಜಿ ಅತ್ಯಂತ ಹೆಚ್ಚು ಸಮಯ ತಂಗಿದ್ದ ವರ್ಷ? ( PSI-2007 )
👉 1927

31) ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ? ( PSI-2006 )
👉 ಶಿರಾ

32) ಕರ್ನಾಟಕ ದಂಡಿ ಎಂದು ಕರೆಯುವರು? ( PSI-2006 )
👉 ಅಂಕೋಲಾ

33) ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ? ( PSI-2005 )
👉 ಜನಪ್ರತಿನಿಧಿ ಸರ್ಕಾರಕ್ಕೆ ಚಳುವಳಿ , 

34) ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು? ( PSI-2005 )
👉 ಹುಯಿಗೋಳ್  ನಾರಾಯಣರಾವ್

35) ಹೈದರಾಬಾದಿನ ನಿಜಾಮರ ನಿಯಂತ್ರಣದಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು ಭಾರತದ ಒಕ್ಕೂಟದಲ್ಲಿ ಸೇರಿದ್ದು? ( PSI-2002 )
👉 1948 ಸಪ್ಟಂಬರ್

Post a Comment

0 Comments